Thursday, September 29, 2011


ಮಾರ್ಕೆಟಿಂಗ್ ಮಾತು:
ವಿಶೇಷವಾಗಿ ಮಹಿಳಾ ಧೂಮಪಾನಿಗಳ ಸಂಖ್ಯೆ `ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ'ಗಳಲ್ಲಿ ಮಾತ್ರ ಹೆಚ್ಚುತ್ತಿದೆ ಎಂದು ಆಧುನಿಕ ಸಂಶೋಧನೆ ಹೇಳಿದೆ. ಈ ನಿಟ್ಟಿನಲ್ಲಿ ಮಾರುಕಟ್ಟೆಗಳು ತಂಬಾಕು ಉತ್ಪನ್ನಗಳ ಮಾರಾಟಕ್ಕಾಗಿ ಮಹಿಳೆಯರ ಕಡೆಗೆ ವಿಶೇಷವಾಗಿ ಗಮನಹರಿಸಿವೆ. ಇದಕ್ಕಾಗಿ ವಿಶೇಷ ಜಾಹಿರಾತು, ಇತ್ತೀಚಿನ ಪೀಳಿಗೆಗಳ ಚಿತ್ತ ತನ್ನತ್ತ ಸೆಳೆದುಕೊಳ್ಳಲು ಅವಶ್ಯವಾಗಿರುವ ಎಲ್ಲಾ ಹೈಟೆಕ್ ಹೆಜ್ಜೆಗಳನ್ನು ತಂಬಾಕು ಕಂಪೆನಿಗಳು ತೆಗೆದುಕೊಳ್ಳಲಾಗುತ್ತಿದೆ.


ದಂ ಮಾರೆ ದಂ...
ಮದಿರೆವಾಸಿ ಮಾನನಿಯರು

ಆಗ ತಾನೆ ಕಚೇರಿ ಕಾರುಬಾರು ಮುಗಿಸಿ ಬೆಂಗಳೂರಿನ ಪ್ರತಿಷ್ಟಿತ ರೆಸಿಡೆನ್ಸಿ ರಸ್ತೆಯಿಂದ ಮನೆಗೆ ಹೋಗುತ್ತಿದ್ದೆ. ಐ ಥಿಂಕ್ ಅದು ರಾತ್ರಿ 2 ಗಂಟೆ ಸಮಯ. ದಿನದಲ್ಲಿ ರೋಡ್ ಕ್ರಾಸ್ ಮಾಡೋದಕ್ಕೆ ಕನಿಷ್ಠ 15-20 ನಿಮಿಷ ಅವಶ್ಯವಾಗಿ ಬೇಕೆ ಬೇಕು.  ಆದರೆ, ಆ ಹೊತ್ತಲ್ಲಿ ಬರೀ ಬೀದಿನಾಯಿಗಳ ಕೂಗಾಟ ಹಾಗೂ ಸ್ಟ್ರೀಟ್ ಲ್ಯಾಂಪ್ ಬಿಟ್ರೆ ಬೇರೆ ಏನೂ ಇಲ್ಲ. ಅಂಥ ನಿಶಾಚರ ಮೌನದ ಮಧ್ಯೆ ಇಬ್ಬರು 24-25 ವಯೋಮಾನದ ಆಸುಪಾಸಿನ ಯುವತಿಯರು ಯಾವುದೇ ಭಯವಿಲ್ಲದೆ ಹೋಗುತ್ತಿದ್ದರು. ಅವರನ್ನು ನೋಡಿದ್ದೇ ಅಚ್ಚರಿಯೇನೋ ಆಯ್ತು. ಜತೆಗೆ ಪುಂಖಾನುಪುಂಖವಾಗಿ ಪ್ರಶ್ನೆಗಳು ಏಳುತ್ತಿದ್ದವು...
ಆ ಹೊತ್ತಿಲ್ಲದ ಹೊತ್ತಲ್ಲಿ ಹುಡುಗಿಯರಿಬ್ಬರು ಅಂಡೆಪಿಕರ್ಿಗಳಂತೆ ಅಡ್ಡಾಡುತ್ತಿದದ್ದನ್ನು ನೋಡಿದ್ದೇ, "ಎಂದು ಯುವತಿಯರು ಮಧ್ಯೆ ರಾತ್ರಿಯಲ್ಲಿ ಯಾವ ಸಮಸ್ಯೆ ಇಲ್ಲದೆ ಸಲೀಸಾಗಿ ಓಡಾಡುವಂತಾಗುತ್ತಾರೋ; ಅಂದು ನಮ್ಮ ರಾಷ್ಟ್ರ ನಿಜವಾಗಿಯೂ ಸ್ವತಂತ್ರ್ಯ ಹೊಂದಿದೆ ಎಂದರ್ಥ" ಎಂಬ ರಾಷ್ಟ್ರಪಿತರ ಮಾತು ನೆನಪಾಯ್ತು.
ಸ್ಟ್ರಿಟ್ ಲ್ಯಾಂಪ್ನ ಬೆಳಕಲ್ಲಿ ನಾನೂ ಅಲ್ಲೇ ಫುಟ್ಪಾತ್ ಮೇಲೆ ನಿಂತಿದ್ದ ಟೀ ಕುಡಿಯಲು ನಿಂತುಕೊಂಡೆ. ಅಷ್ಟ್ಟರಲ್ಲೇ ಅವರೂ ಆ ಕಡೆಗೆ ಬಂದು ನಿಂತರು. ಆಶ್ಚರ್ಯ ಅವರ ಕೈಯಲ್ಲಿ ರದ್ದಿಯಲ್ಲಿ ಸುತ್ತಿದ್ದ ಬಾಟಲ್ಗಳಿದ್ದವು. ಸಿಗಾರ್ ತೆಗೆದು ಸೇದಲಾರಂಭಿಸಿದರು. ಜತೆಗೆ ಕೈಯಲ್ಲಿದ್ದ ಬಾಟಲ್ಗಳನ್ನು ಓಪನ್ ಮಾಡಿ ಸಿನಿಮೀಯ ರೀತಿಯಲ್ಲಿ ನಿರರ್ಗಳವಾಗಿ ಬಾಟಲಿಬ್ರಹ್ಮನನ್ನು ಗಂಟಲಿಗಿಳಿಸಿ, ಸುರಾಧೀನರಾದರು.
ಆಗ ಯಾವ ರಾಷ್ಟ್ರಪಿತರ ಮಾತು ಕಿವಿಯಲ್ಲಿ ರೊಂಯ್.. ಎಂದು ಹೋಗ್ತಾ ಇತ್ತೋ ಅದರ ಬದಲು, ಯಾಕೋ ಸ್ವಲ್ಪ ಜಾಸ್ತಿನೇ ಸ್ವಾತಂತ್ರ್ಯ ಸಿಕ್ಕಿದೆ ಎಂದೆನಿಸುತ್ತಿತ್ತು. ಹೋಗ್ಲಿ ಊರು ಉಸಾಬರಿ ನನಗ್ಯಾಕೆ ಎಂದು ಸುಮ್ಮನಾದೆ. ಕೈಯಲ್ಲಿದ್ದ ಟೀ ಹೀರಿ, ಮನೆ ಕಡೆ ಕಾಲು ಕಿತ್ತಿದೆ. ಮನೆ ಏನೋ ರೀಚ್ ಆದೆ. ಆದ್ರೆ ಆ ದೃಶ್ಯ ಮಾತ್ರ ಮನಸೆಂಬ ಪ್ರಾಜೆಕ್ಟರ್ನಿಂದ ಸರಿಯುತ್ತಿಲ್ಲ. ಮತ್ತೆ-ಮತ್ತೆ ಆಗಂತುಕವಾಗಿ ಅದೇ ಆಲೋಚನೆ, ಛೇ ಇದೇನು ಎಂಥಾ ಪರಿಸ್ಥಿತಿ ಬಂತಲ್ಲ.. ಹೀಗೆ ಸೋ ಆನ್...
ಮಹಿಳೆ ದಾರಿದೀಪ:
ಕನ್ನಡದಲ್ಲಿ ಒಂದು ಪ್ರತಿಷ್ಠಿತ ಗಾದೆ ಇದೆ. ಅದರ ತಾತ್ಪರ್ಯ ಇಷ್ಟೆ; ರಕ್ಷಿಸಿ, ಉಳಿಸಿ ಬೆಳೆಸಬೇಕಾದವರೇ ಭಕ್ಷಕರಾದರೆ ಸಮಾಜದ ಸ್ವಾಸ್ಥ್ಯವನ್ನು ಕಾಯುವುದು ಕನಸಿನ ಮಾತೇ ಸರಿ. ಗಾದೆಯ ಪುನರ್ಮನನದ ಮೂಲ ಉದ್ದೇಶವೆಂದರೆ, ನಮ್ಮ ಹಿಂದೂಸ್ಥಾನದಲ್ಲಿ ಹಿಂದಿನಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ. ಸ್ತ್ರೀ ಮಾತೆ, ಮಮತೆಯ ಸಪ್ರತೀಕ, ಕುಟುಂಬವನ್ನು ಸರಿದಾರಿಗೆ ತರಬಲ್ಲವಳು ಹೀಗೆ ಹತ್ತು ಹಲವಾರು ರೀತಿಯಲ್ಲಿ ಹೊಗಳಿ ಉಪ್ಪರಿಗೆ ಮೇಲೆ ಕೂಡಿಸಲಾಗಿದೆ. ಅಷ್ಟೇ ಯಾಕೆ ಈಗಲೂ ಶಿಕ್ಷಣದ ವಿಚಾರಕ್ಕೆ ಬಂದಾಗ ಮಹಿಳೆಯೊಬ್ಬಳು ಕಲಿತರೇ ಇಡೀ ಕುಟುಂಬವೇ ಕಲಿತಂತೆ ಎಂಬ ಅತಿಶಯೋಕ್ತಿ ಅವಳ ಸುತ್ತ ಗಿರಕಿ ಹೊಡಿಯುತ್ತಲೇ ಇವೆ.
ಮಹಿಳೆಯ ಮರ್ಮದ ಕುರಿತು ಹೇಳಲಾಗದು. ಇತಿಹಾಸದ ಪುಟಗಳನ್ನು ಕಲಕಿದಾಗ ಹೊರಬೀಳುವ ಸತ್ಯಾಂಶ ಕೂಡ ಇದೇ ಆಗಿದೆ. ಅನೇಕ ಮಹಾನ್ ಪುರುಷರ ಹೆಸರುಗಳು ಸುವರ್ಣ ಅಕ್ಷರಗಳಲ್ಲಿ ಬರೆಯಲ್ಪಡಬೇಕಾದರೆ ಅಲ್ಲಿ ಮಹಿಳೆ ಪಾತ್ರ ಅನನ್ಯ. ಅದು ತಾಯಿಯ ರೂಪದಲ್ಲಾಗಿರಬಹುದು ಅಥವಾ ಹೆಂಡತಿ ಮತ್ತ್ಯಾವುದೋ ರೀತಿಯಲ್ಲಿ ಅವಳು ಸಾಧಿಸಲಾರದ್ದನ್ನು ಸಾಧಿಸಿದ್ದಾಳೆ. ಅದಕ್ಕಾಗಿಯೇ ಅಬ್ದುಲ್ ಕಲಾಂ ತಮ್ಮ `ಅಗ್ನಿಯ ರೆಕ್ಕಗಳು' ಪುಸ್ತಕದ ಪ್ರಿಫೇಸ್ನಲ್ಲೇ ಪದಗಳ ವರ್ಣವೆಗೆ ಸಿಗದ ತಾಯಿಯ ಕುರಿತು ಬರೆದಿದ್ದಾರೆ.
 ಅದಕ್ಕಾಗಿಯೇ ಹೆಣ್ಣು ಒಲಿದರೇ ನಾರಿ, ಮುನಿದರೆ ಮಾರಿ ಎಂದೂ ಹೇಳಲಾಗುತ್ತದೆ. ಅದಕ್ಕೆ ಹಲವು ನಿದರ್ಶನಗಳೂ ಇವೆ. ಆದರೆ, ಇಂದು ಇಂಥ ಮಹಿಳೆ ಯಾವ ಸ್ಟೆಟಸ್ಗೆ ಬಂದಿಳಿದಿದ್ದಾಳೆ ಎಂದರೆ, ಬೀದಿ ಪಕ್ಕದಲ್ಲಿ ಬಿಯರ್ ಬಾಟಲ್ ಹಿಡಿದು, `ದಂ' ಹೊಡಿಯುತ್ತಾ ಮಹಿಳಾ ಸಹಜ ಎಲ್ಲ ಗುಣಗಳನ್ನು ಗಾಳಿಗೆ ತೂರಿ, ಮಾನವನ್ನು ಮೂರು ಕಾಸಿಗೆ ಹರಾಜು ಮಾಡುತ್ತಿದ್ದಾಳೆ ಎಂದರೂ ತಪ್ಪಾಗಲಾರದು.
ಹಿಂದಿನ ಅಂಕಿಅಂಶಗಳ ಕಡೆ ಮೆಲುಕು ಹಾಕುವುದಾರೆ, 2008ರಲ್ಲಿ ಶೇ. 18.3 ಮಹಿಳೆಯರು ಧೂಮಪಾನದ ಸೇವಿಸುತ್ತಿದ್ದರು. ಅದೇ ರೀತಿ ಬೇರೆ ರಾಷ್ಟ್ರಗಳಾದ ಅಜರ್ೆಂಟಿನಾದಲ್ಲಿ ಶೇ.22.6 ಹಾಗೂ ಉರುಗ್ವೆಯಲ್ಲಿ ಶೇ. 25.1ರದಷ್ಟು ಮಹಿಳೆಯರು ಸ್ಮೋಕ್ ಮಾಡುತ್ತಾರೆ ಎಂದು ಸಂಖ್ಯಾಶಾಸ್ತ್ರ ಹೇಳುತ್ತದೆ. ಇದೇ ರೀತಿ ಮುಂದುವರೆದರೆ, 2025ರ ವೇಳೆಗೆ ಮಹಿಳಾ ಧೂಮಪಾನಿಗಳ ಸಂಖ್ಯೆಯಲ್ಲಿ ಶೇ. 20ರಷ್ಟು ಹೆಚ್ಚಳವಾಗಲಿದೆ ಎಂದು ಒಂದು ಸಂಶೋಧನೆ ಹೇಳುತ್ತದೆ.
ಅದೆಲ್ಲಾ ಬೇರೆ ವಿಚಾರ. ಆದರೆ, ನೈತಿಕತೆಯ ಗರಡಿಗೆ ಬಂದಲ್ಲಿ ಧೂಮಪಾನ ಸೇವನೆ ಎಂದರೆ ಅದು ಪಾಪ ಪ್ರಜ್ಞೆ ಎನ್ನುವಷ್ಟು ಉನ್ನತ ಆದರ್ಶವುಳ್ಳ ರಾಷ್ಟ್ರ ನಮ್ಮದು. ಇಂಥ ಪವಿತ್ರ ಭೂಮಿಯಲ್ಲಿ ಕಾಲ್ ಸೆಂಟರ್ನಲ್ಲಿ ರಾತ್ರಿ ಇಡೀ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ. ಹೀಗಾಗಿ ಮೈಂಡ್ ರಿಲ್ಯಾಕ್ಸೇಷನ್ ಎಂಬ ಕಾರಣವೊಡ್ಡಿ, ಈ ರೀತಿ ನೈತಿಕತೆಯನ್ನು ಅಧಃಪತನಗೊಳಿಸುವುದು ಯಾವ ಸೀಮೆ ನ್ಯಾಯ ಸ್ವಾಮಿ..?
ಒಟ್ಟಲ್ಲಿ ವಿದೇಶಿ ಸಂಸ್ಕೃತಿಯ ಆಗಮನದಿಂದ ನಾವು ಇಲ್ಲಿಯವರೆಗೂ ಉಳಿಸಿ ಬೆಳೆಸಿಕೊಂಡು ಬಂದಿರುವ ಸಂಸ್ಕೃತಿ ಹೊಳೆಯಲ್ಲಿ ಹಣಸೆ ಹಣ್ಣು ತೊಳೆದಂತೆ ಎಂಬಂತಾಗಿದೆ. ಇದರ ರಕ್ಷಣೆಗಾಗಿ ಮಹಿಳೆಯರೇ ಮನಸು ಮಾಡಬೇಕಷ್ಟೆ, ಬೆಂಗಳೂರಂಥ ಮೆಟ್ರೋ ಪಾಲಿಟಿಯನ್ ಸಿಟಿಗಳಲ್ಲಿ ಸ್ಮೋಕ್ ಮಾಡದಿರುವದೆಂದರೆ, ಅವರು ಒಂಥರಾ ಸಂಸ್ಕೃತಿಕರಣವಾಗದ ಗುಗ್ಗು ಎಂದು ಭಾವಿಸಲಾಗುತ್ತದೆ. ಇದಕ್ಕಾದರೂ ಬಗ್ಗಿ ಫ್ಯಾಷನ್ಗೊಸ್ಕರ ಮಾಮನಿ ಮದಿರೆಯ ಪಾಲಾಗುತ್ತಾಳೆ. ಮುಂದಾಗುವುದೆಲ್ಲಾ ಗೊತ್ತೇ ಇದೆ. ನೀವೆ ಹೇಳಿ ಇಂತಹರಿಂದ ಮುಂದೆ ಅವರು ಮಕ್ಕಳು ಏನನ್ನಾದರೂ ಸಮಾಜದ ಉದ್ಧಾರಕ್ಕಾಗಿ ಏನಾದರೂ ಮಾಡುತ್ತಾರೆ ಎನ್ನುವುದು ಪಳಗದ ಸಲಗವನ್ನು ನಂಬುವ ಮುಗ್ಧತನವೇ ಸರಿ. ಅಲ್ವಾ..?
http://www.ekanasu.com/2012/01/blog-post_01.html




ಹೀಗೊಂದು `ನೀರು+ಧಾರ=ನಿರ್ಧಾರ'
ತುಂಬಾ ಚೆನ್ನಾಗಿ ನೆನಪಿದೆ, ಬರೋಬ್ಬರಿ ಆರು ತಿಂಗಳು ಕಳೆದಿರಬಹುದು ಅನ್ಸುತ್ತೆ. ನಾನು ನನ್ನ ಬ್ಲಾಗ್ ಅನ್ನು ಬಳಕೆ ಮಾಡಲಾಗಲಿಲ್ಲ. ಅದಕ್ಕೆ ಲೇಖನಗಳನ್ನು ಬರೆಯಬೇಕೆಂದು ಹಲವುಬಾರಿ ಕುಳಿತುಕೊಂಡೆ, ಆದರೆ ಹಾಗೇ ಮಾಡಲಾಗಲಿಲ್ಲ. ಕಾರಣ, ಸ್ವಲ್ಪ ಬ್ಯೂಸಿ ಆಗಿದ್ದೆ. ಅದಕ್ಕಾಗಿ ಈಗ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಕನಿಷ್ಠ ತಿಂಗಳಲ್ಲಿ ಎರಡು ಬಾರಿಯಾದರೂ, ಬ್ಲಾಗ್ ಅನ್ನು ಬಳಸಲೇ ಬೇಕು.ಇದಕ್ಕಾಗಿ ನಿಮ್ಮ ಪ್ರೋತ್ಸಾಹ ಹಾಗೂ ಬೆಂಬಲ ನನಗೆ ಅವಶ್ಯ... ನೀವು ಹಾಗೇ ಮಾಡ್ತೀರಿ ಅನ್ನೋ ನಂಬಿಕೆ ನನಗಿದೆ.
ಎಲ್ಲರಿಗೂ ವಿಜಯ ದಶಮಿಯ ಹಾರ್ದಿಕ ಶುಭಾಷಯಗಳು.
ನಿಮ್ಮ ಸ್ನೇಹಿತ
ಆತೀಶ್