Wednesday, October 26, 2011

ಪ್ರತಿಯೊಬ್ಬರೂ ಓದಲೇ ಬೇಕಾದ ಮನದಾಳದ ಮಾತು... ತಪ್ಪದೇ ಓದಿ ಪ್ಲzzz.


ಕಾಡತಾವ ನೆನಪು...
ಈ ಬಾರಿಯ ದೀಪಾವಳಿ ನನ್ ಪಾಲಿಗೆ ಬೆಳಿಕಿನ ಹಬ್ಬ ಅಲ್ಲ; ಬದಲಿಗೆ ತಮಸು ಆವರಿಸಕೊಂಡ ದಿಬ್ಬ! ರೂಮಿನ ಮೇಲೆ ನಿಂತು (ಬೆಂಗಳೂರು) ಆಕಾಶದ ಚುಕ್ಕೆ ಎಣಿಸುವ ಪ್ರಯತ್ನದಲ್ಲಿದ್ದೆ, ಅಷ್ಟರಲ್ಲೇ ಏನೆನೋ ಆಲೋಚನೆಗಳು ಆಗಂತುಕವಾಗಿ ಮನಸಿನ ಮೂಲೆಯಲ್ಲಿ ಉದ್ಭವಿಸುತ್ತಿದ್ದವು. ಕಳೆದ ಬಾರಿಯ ದೀಪಾವಳಿ ಕುರಿತು ಆಲೋಚಿಸುವಾಗ ಈ ಬಾರಿಯ ದೀಪಾವಳಿ ನನಗೆ ಮೂದಿಸುತಿತ್ತು. ಆಕಾಶಕ್ಕೆ ಸೊಂಯ್ ಎಂದು ಹಾರಿದ ಬಾಣಗಳು ಸೀದಾ ಬಂದು ನನ್ನ ಹೃದಯಕ್ಕೆ ಘಾಸಿಗೊಳಿಸುತ್ತಿದ್ದವು. ಹಾರುತ್ತಿದ್ದ ಪಟಾಕಿಗಳು ಅಂತರಾತ್ಮವನ್ನು ಕದಲಿಸುತ್ತಿದ್ದವು. ಹೀಗೆಲ್ಲಾ ನನಗಾಗಿದ್ದು ಇದೇ ಮೊದಲು.
ಈ ಹಿಂದೆ ನನಗೆ ಎಂದೂ ಹೀಗಾಗಿರಲಿಲ್ಲ. ದೀಪಾವಳಿ ಅಂದ್ರೆ ನನಗೆ ಅತೀ ಪ್ರೀತಿಯ ಹಬ್ಬ, ಎಲ್ಲ ಹಬ್ಬಗಳಿಗಿಂತ ನಾನು ಪ್ರೀತಿಸುವ ಹಾಗೂ ಇಷ್ಟಪಡುವ ಹಬ್ಬ. ಇದರೊಂದಿಗೆ ನನ್ನ ಅನೇಕ ಭಾವಚುಂಬಿ ಕನಸುಗಳು ತಳುಕುಹಾಕಿಕೊಂಡಿವೆ. ನನಗೆ ಈಗಲೂ ತುಂಬಾ ಚೆನ್ನಾಗಿ ನೆನಪಿದೆ. ಆ ದಿನ, ಅದನ್ನೂ ನಾನು ಸಾಯುವವರೆಗೂ ಮರೆಯಲು ಸಾಧ್ಯವೇ ಇಲ್ಲ. ಇದು ಮಾತ್ರ ಸ್ಪಟಿಕದಷ್ಟು ನಿಚ್ಚಳ, ಸ್ಪಷ್ಟ. ಅದು ಕೂಡ ದೀಪಾವಳಿಯ ದಿನವೇ ಆಗಿತ್ತು. ಆಗ ನಾನು ಬರೀ ಆರೇಳು ವರ್ಷದ ಪೋರ(ಬಾಲಕ). ಕಾಂಪೌಂಡ್ ಮೇಲೆ ಕುಳಿತು ನನ್ನ ಓಣೆಯಲ್ಲಿ ಪಟಾಕಿಹಾರಿಸುತ್ತಿದ್ದ ಬೇರೆಯವರನ್ನು ನೋಡುತ್ತಿದ್ದೆ. ಅವರು ಖುಷಿಯಿಂದ ಕುಟುಂಬದೊಂದಿಗೆ ಪಟಾಕಿ ಹಾರಿಸುತ್ತಿದ್ದರು. ನಾನೂ ಅವರಂತೆಯೇ ಬಾಣ-ಬಿರುಸುಗಳನ್ನು ಹಾರಿಸಬೇಕು, ಮನಃತುಂಬಿ ಕುಣಿದಾಡಬೇಕು, ಪಟಾಕಿಯ ಸದ್ದು ಒಳಗೆ ಹಾಸಿಗೆಯಲ್ಲಿ ಮಲಗಿದ್ದ ಅಣ್ಣ ಹಾಗೂ ಅಕ್ಕಳಿಗೆ ಎಬ್ಬಿಸಿ ಅಚ್ಚರಿಯನ್ನುಂಟುಮಾಡಬೇಕು ಎಂದು ಕುಳಿತಿದ್ದೆ. ಮುಂದೆ ನಾನೂ ವಿಭಿನ್ನಾವಿಭಿನ್ನ ಥರದ ಪಟಾಕಿಗಳನ್ನು ಹಾರಿಸುತ್ತಿರುವುದನ್ನು ಹೃದಯದಲ್ಲಿ ಧೆನಿಸಿಕೊಂಡೆ, ವ್ಹಾ...! ಇನ್ನೇನು ಸ್ವರ್ಗಕ್ಕೆ ಮೂರೇ ಗೇಣು.. ಮತ್ತೆ ವಾಸ್ತವಕ್ಕೆ ಮರಳಿದೆ.
ಎಲ್ಲರೂ ಪಟಾಕಿ ಹೊಡೆದು ಮನೆಯೊಳಗೆ ತೆರಳಿದ್ದರು. ಆದರೆ, ನಾನು ಮಾತ್ರ ಅಪ್ಪನಿಗಾಗಿ ಕಾಯ್ತಾ ಕುಳಿತಿದ್ದೆ. ಬೆಳಗ್ಗೆ ನಾನು ಪಟಾಕಿ ಲಿಸ್ಟ ಮಾಡಿಕೊಟ್ಟಿದ್ದೆ, ಅಪ್ಪ ನನಗೆ ಆ ಎಲ್ಲಾ ಪಟಾಕಿಗಳನ್ನು ತರುವುದಾಗಿ ಪ್ರಾಮಿಸ್ ಮಾಡಿ ಹೋಗಿದ್ರು. ಆದ್ರೆ ರಾತ್ರಿ 10 ಗಂಟೆ ಆದರೂ ಅಪ್ಪನ ಸುಳಿವೇ ಇಲ್ಲ, ಒಳಗಡೆಯಿಂದ ಅಮ್ಮ ಕೂಗಿದಳು ಬಾರೋ ನಿಮ್ಮಪ್ಪ ಇವತ್ತೂ ಲೇಟೆ.. ಬಂದು ಊಟ ಮಾಡಿ ಮಲ್ಕೋ ಎಂದರು. ಅದರೆ ಮನಸಿನಲ್ಲಿ ಮಂಡಕ್ಕಿ ತಿನ್ನುತಿದ್ದ ನನ್ನ ಈ ಹಾಳು ವಾಂಛೆ ನಿದ್ದೆ ಮಆಡಲು ಬಿಟ್ಟೀತೆ.
ಆಯ್ತಮ್ಮ ಇನ್ನೇನು ಅಪ್ಪ ಬರ್ಬಹುದು ಎಂದು ಓಣೆಯ ರಸ್ತೆ ಕಡೆ ಕಣ್ಣು ಹಾಯಿಸಿದೆ. ಯಾರೂ ಇಲ್ಲ. ಕಣ್ಣು ರೆಪ್ಪೆ ಮುಚ್ಚುತಿದ್ದವು, ಆದರೂ ಪಟಾಕಿ ಹಾರಿಸಬೇಕೆಂಬ ನನ್ನ ಹೆಬ್ಬಯಕೆಯ ಎದುರು  ನಿದ್ದೆ ಯಾವ ಲೆಕ್ಕ ಹಾಗೇ ಕುಳಿತೆ. ಕೊನೆಗೂ ನಿರೀಕ್ಷೆ ಬಸಿರು ಹರಿದು ರಸ್ತೆಯ ಮೇಲೆ ಯಾರೋ ಬರುವ ಕರಿನೆರಳು ಕಣ್ಣಿಗೆ ಕಾಣಿಸಿತು. ಅದ್ಯಾರಿರಬಹುದೆಂದು ತದೇಕ ಚಿತ್ತದಿಂದ ನೋಡಿದೆ. ದೂರ ಕಡಿಮೆ ಆಗುತ್ತಾಹೋದಂತೆ, ಆಖತ್ರಿ ಆಯ್ತು ಅಪ್ಪಾನೇ ಬರ್ತಾ ಇದಾರೆ ಅಂತಾ, ಯುನೋ ಆ ನನಗೆ ಸ್ವರ್ಗ ಜಸ್ಟ್ ಮೂರೇ ಗೇಣು! ಕಾಂಪೌಂಡ್  ಎತ್ತರ ಗಮನಿಸದೇ ಹಾರಿ ರಸ್ತೆ ಮೇಲೆ ನಿಂತೆ.. ಆಶ್ಚರ್ಯ ಅಪ್ಪನ ಕೈಯಲ್ಲಿ ಯಾವ ಬಾಣ-ಬಿರುಸೂ ಇಲ್ಲ. ಸೈಕಲ್ನಿಂದ ಕೆಳಗಿಳಿದವರೇ ಅವರಿಗೆ ನಿಲ್ಲೋದಕ್ಕೂ ಆಗುತ್ತಿಲ್ಲ. ಅಮೇಲೆ ತಾನೆ ಗೊತ್ತಾಗಿದ್ದು, ಅಪ್ಪಾ ಅವತ್ತೂ ಸುರಾಧಿನರಾಗಿದ್ದರು. ನನ್ನ ಮೂರು ಗಂಟೆಯ ನಿರೀಕ್ಷೆ ಕಣ್ಣಾಲಿಯಲ್ಲಿ ನೀರಾಗಿ ಹರಿಯಲಾರಂಭಿಸಿತು. ಕಷ್ಟಪಟ್ಟು ಕಂಟ್ರೋಲ್ ಮಾಡಿಕೊಳ್ಳಲು ಯತ್ನಿಸಿದೆ, ಆಗಲಿಲ್ಲ. ಅಮ್ಮನೆಡೆಗೆ ಓಡಿ ಗಟ್ಟಿಯಾಗಿ ತಬ್ಬಿಕೊಂಡೆ, ಅಳಲಾರಂಭಿಸಿದೆ. ಅಮ್ಮ ಕೂಡ ಅಷ್ಟೆ ನನ್ನನ್ನು ತನ್ನ ಸೆರಗಿನಲ್ಲಿ ನನ್ನನ್ನು ಅವಿತುಕೊಂಡ ಸಂತೈಸಿದಳು. ಅಪ್ಪಾ ಒಳಗೆ ಬಂದವರೇ ಅಮ್ಮನಿಗೆ ಹೊಡೆಯಲಾರಂಭಿಸಿದರು. ಇದು ನಮ್ಮ ಮನೆಯಲ್ಲಿ ನಿತ್ಯ ಕಥೆ...
ಟ್ರಸ್ಟ್ ಮಿ ಫ್ರೆಂಡ್ಸ್ ಅವತ್ತು ಪಟಾಕಿ ತರಲು ಮರೆತಿದ್ದ ನಮ್ಮಪ್ಪ ಮುಂದೆ ನನ್ನ ಭವಿಷ್ಯಕ್ಕಾಗಿ ಅಷ್ಟೊಂದು ಕಷ್ಟ ಪಡಬಹುದು ಎಂದುಕೊಂಡಿರಲಿಲ್ಲ. ಅವರು ತನ್ನ ಎಲ್ಲ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ, ಅಷ್ಟೆ ಯಾಕೆ ತಮ್ಮ ಒಡಲಲ್ಲಿ ಅನೇಕ ಚಿಂತೆಗಳನ್ನು ತುಂಬಿಕೊಂಡು ನನಗೆ ಪಿಜಿ(ಪತ್ರಿಕೋದ್ಯಮ) ಓದಿಸಿದರು. ಅಂದಿನ ಅಪ್ಪನಿಗೂ ಇಂದಿನ ಅಪ್ಪನಿಗೂ ವ್ಯತ್ಯಾಸ ತಾಳೆ ಹಾಕುವುದಾದರೆ, ಕಣ್ರೆಪ್ಪೆ ಒದ್ದೆಯಾಗುತ್ತೆ. ಬಳಿಕ ನಾನೂ ಸ್ನಾತಕೋತ್ತರ ಮುಗಿಸಿ, ಸಂಯುಕ್ತ ಕನರ್ಾಟಕ ಬೆಂಗಳೂರು ಕಚೇರಿಯಲ್ಲಿ ಕೆಲಸಕ್ಕೆ ಸೇರಿಕೊಂಡೆ, ಇವತ್ತಿಗೆ ನಾನು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವರ್ಷ ಒಂದು ತಿಂಗಳು ಕಳೆದಿರಬಹುದು. ಅದೇ ರೀತಿ ನನ್ನ ಭವಿಷ್ಯಕ್ಕಾಗಿ ಬೆನ್ನೆಲುಬಾಗಿ, ಇಂಬಾಗಿ, ಕಸುವಾಗಿ, ಸ್ಫೂತರ್ಿಯ ಸೆಲೆಯಾಗಿ ನಿಂತಿದ್ದ ನಮ್ಮಪ್ಪ ನನ್ನನ್ನು ಬಿಟ್ಟು ಅಗಲಿ ಆರು ತಿಂಗಳುಗಳೇ ಕಳೆದಿವೆ. ಆದರೆ, ಅವರ ನೆನಪು ಮಾತ್ರ ಇನ್ನೂ ಹಸಿಹಸಿ, ಅಮ್ಮ ಕೂಡ ಅಷ್ಟೆ ಈ ದೀಪಾವಳಿಯಲ್ಲಿ ಯಾವುದೇ ಆಚರಣೆ ಮಾಡುತ್ತಿಲ್ಲ. ಮನೆಯಲ್ಲೆಲ್ಲಾ ಸೂತಕದ ಛಾಯೆ... ನಾನು ಈ ಸಲ ದೀಪಾವಳಿಗೆ ಮನೆಗೆ ಹೋಗಲಾಗಲಿಲ್ಲ. ಯಾಕೋ ಹೋಗಬೇಕೆಂದೂ ಎನಿಸುತಿಲ್ಲ. ಭಾವನೆಗಳು ಭಾರವಾಗಿ, ಕಣ್ಣಹನಿಗಳು ಬತ್ತಿಹೋಗಿವೆ ಎಂದೆನಿಸುತ್ತಿದೆ.
ಅದಕ್ಕೆ ಹೇಳಿದ್ದು, ಹೊರಗಡೆ ದೀಪಾವಳಿ ಆದರೆ ನನ್ನೊಡಲಲ್ಲಿ ದೀಪಗಳ ಹಾವಳಿ ಎಂದು..
ಫ್ರೆಂಡ್ಸ್ ಅಪ್ಪನನ್ನು ಎಂದೂ ಹೇಟ್ ಮಾಡಬೇಡಿ ಆದಷ್ಟು ದಿನ ಅವರೊಂದಿಗೆ ಖುಷಿಖುಷಿಯಿಂದ ಬದುಕಿ, ಈ ದೀಪಾವಳಿ ನಿಮ್ಮೆಲ್ಲರ ಬಾಳಲ್ಲಿ ಸುಖ, ನೆಮ್ಮದಿ, ಶಾಂತಿ ಹಾಗೂ ಬೆಳಕನ್ನು ತರಲಿ ಎನ್ನುವುದೇ ನನ್ನ ಹೆಬ್ಬಯಕೆ..


Saturday, October 22, 2011

ಇಲ್ಲ್ಲೂ ನೀನೆ ಎಲ್ಲೂ ನೀನೆ ಎಲ್ಲೆಲ್ಲೂ ನೀನೆ..

ಹೊಸ ಗಾನಾ ಬಜಾನಾ..
ಅಪಸ್ವರದ ಮಧ್ಯೆ ಮೆಟ್ರೋ ಮೋಡಿ..!
ಮೊನ್ನೆ ಬೆಂಗಳೂರಿಗರ ಖುಷಿಗೆ ಪಾರವೇ ಇರಲಿಲ್ಲ. ಅಂತೂ ಬಹುದಿನದ ಕನಸು ನನಸಾಯಿತು ಎಂಬ ಸಾರ್ಥಕತೆ ಜತೆಗೆ ದಕ್ಷಿಣ ಭಾರತದಲ್ಲಿಯೇ ಇದೇ ಮೊದಲು ಕನರ್ಾಟಕದಲ್ಲಿ ಮೆಟ್ರೋ ಟಿಸಿಲೊಡೆದು ಹಳಿಗಳ ಮೇಲೆ ರೊಂಯ್ ಗುಟ್ಟುತ್ತ ಹೋಗುವಾಗ ಎಲ್ಲರ ಕಣ್ಣಲ್ಲೂ ಧನ್ಯತೆಯ ಭಾವ.
ಹಲವು ವರ್ಷಗಳಿಂದ ಎಲ್ಲರ ಗಮನ ತನ್ನತ್ತ ಸೆಳೆದಿದ್ದ `ನಮ್ಮ ಮೆಟ್ರೋ'ಗೆ ಕೊನೆಗೂ ಉದ್ಘಾಟನೆಯ ಭಾಗ್ಯ ಲಭಿಸಿದೆ. ವಿಧಾನಸೌಧ ಹಾಗೂ ಪರಪ್ಪನ ಅಗ್ರಹಾರ ನಡುವಣ ಸಂಬಂಧ  ಗಟ್ಟಿಗೊಳ್ಳುತ್ತಿರುವ ಜತೆಜತೆಗೆ ಈ ಬೆಳವಣಿಗೆ ನಡೆಯಿತು. ತಾನೇ ಮೆಟ್ರೋ ಉದ್ಘಾಟನೆ ನೆರವೇರಿಸಬೇಕು ಎಂಬ ವಾಂಛೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಯೂರಪ್ಪ ಅವರ ಅನುಪಸ್ಥಿಯಲ್ಲಿಯೇ ಈ `ಐ-ಘಟನೆ' ನಡೆದು ಪರದೆಯತ್ತ ಸರಿಯಿತು. ಆಕಡೆ ಕಂಬಿಯ ಮೇಲೆ ಅಂಬೇಗಾಲಿಡುತ್ತಾ ಮೆಟ್ರೋ ಮುನ್ನೆದಿತ್ತು. ಈಕಡೆ ಕಂಬಿಯ ಹಿಂದೆ ಸಂಘಟನೆಯ ನಾಯಕ ಅಂಬ್ಯೂಲೆನ್ಸ್ನಿಂದ ಅಂಬ್ಯೂಲೆನ್ಸ್ಗೆ ಹಾರಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಹಾರುವ ಯತ್ನದಲ್ಲಿದ್ದರು. ಮತ್ತೊಂದು ಕಡೆ ಇವರ ಆಪ್ತರೆನಿಸಿಕೊಳ್ಳುವ ಭಾಜಪ ಸದಸ್ಯರು ಖುಷಿಯ ಕ್ಷಣಗಳನ್ನು ಮೆಟ್ರೋ ರೈಲಲ್ಲಿ ಕಳೆಯುತ್ತಿದ್ದರು. ಇನ್ನೊಂದೆಡೆ ಕೇಂದ್ರವನ್ನೇ ಕದಲಿಸಿದ ಸೆಡ್ಯೂರಪ್ಪ ಹತಾಷೆಯ ನಡುವೆ ತನ್ನ ಕ್ಷಣಗಳನ್ನು `ಗಾಂಧೀ ಭಯಾಗ್ರಫಿ'ಯ ಪುಟಗಳನ್ನು ಭಕ್ತಿಪೂರ್ವಕವಾಗಿ ಎಣಿಸುವ ಪ್ರಯತ್ನದಲ್ಲಿದ್ದರು.
ನಾನು ಈ ಹಿಂದೆ `ಖರಾಬ್ ಟೈಂ' ಅನ್ನೋದರ ಬಗ್ಗೆ ಕೇಳಿದ್ದೆ. ಆದರೆ, ಹೀಗೂ ಇರಬಹುದು ಎಂದೂ ಎಂದೆಂದೂ ಊಹಿಸಿರಲಿಲ್ಲ. ಒಂದು ಟೈಂನಲ್ಲಿ ಕುಬೇರರಂತೆ ಮೆರದ ಇವರೆಲ್ಲ ಹೀಗೂ ಜೈಲಲ್ಲಿ ಕಾಲ ಕಳೆಯುತ್ತಾರೆ ಎಂದೆನಿಸಿರಲಿಲ್ಲ. ಇದೆಲ್ಲ ನೋಡುವಾಗ `ಉಪ್ಪು ತಿಂದವರು ನೀರು ಕುಡಿಯಲೇಬೇಕು' ಎಂಬ ಮಾತು ನೆನಪಾಯ್ತು.
ಏನೇ ಇರ್ಲಿ, `ಹತ್ತರ ಜತೆ ಹನ್ನೊಂದು' ಎಂಬಂತೆ ಪರ ರಾಜ್ಯದ ಮುಖ್ಯಮಂತ್ರಿ ಸಹ ಕೇಂದ್ರ ಕಾರಾಗ್ರಹಕ್ಕೆ ಬಂದು ವಿಸಿಟ್ ಕೊಟ್ಟು ಹೋಗೋ ರೇಂಜಿಗೆ ನಮ್ಮ ಕನರ್ಾಟಕ ಕಾರಾಗೃಹಗಳು ಬಂದಿವೆ ಅಂದ್ರೆ ಒಂದೊಂದು ಸಾರಿ `ಡೌಟ್' ಸ್ಟಾಟರ್್ ಆಗುತ್ತೆ! ನಮ್ಮ ಕಾರಾಗೃಹದ ದ್ವಾರಗಳಿಗೆ ಇಷ್ಟೊಂದು ಕಸುವು ಬಂದುದ್ದಾದ್ರು ಎಲ್ಲಿಂದ? ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ಇಷ್ಟೊಂದು ಆನೆಬಲ ಎಲ್ಲಿಂದ ಬಂತು. ಇದೆಲ್ಲಾ ಸಂತೋಷ ಹೆಡ್ಗೆ ಅವರು ನೀಡಿದ ಗಣಿ ವರದಿ ಬಳಿಕವೇ ಆದ ಪಾಸಿಟಿವ್ ಇಂಪೆಕ್ಟ್ ಅಲ್ವಾ..?
ಒಟ್ಟಲ್ಲಿ ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರಿಗೆ ನಂಬಿಕೆ ಉಲ್ಭಣಿಸಿದೆ. ಬೆಳಿಗ್ಗೆಯಿಂದ ರಾತ್ರಿವರಗೂ ಹಗರಣಗಳನ್ನು ನೋಡಿ ಜನ ಬೇಸತ್ತು ಹೋಗಿದ್ದರು. ರಾಜಕೀಯ ಎಂದರೆ, ವಾಕರಿಕೆ ಹುಟ್ಟಿಸುತಿತ್ತು. ಸಮ್ ಟೈಮ್ಸ್ ಅಂತು ನಾವು ಆರಿಸಿ ಕಳುಹಿದ ಜನನಾಯಕರು ಇವರೇನಾ ಎಂದೂ ಎನಿಸತೊಡಗಿತ್ತು. ಇವರು ಇಷ್ಟೊಂದು ಭ್ರಷ್ಟತೆಯಿಂದ ಮೆರೆದರೂ ಕಾನೂನು ದೇವತೆ ಮತ್ರ ಕನ್ಫ್ಯೂಷನ್ನಲ್ಲಿ ಏಕೆ ಕೂತಿದ್ದಾಳೆ ಎಂದೆನಿಸುತ್ತಿತ್ತು. ಇದರ ಫಲಶೃತಿ ಎಂಬಂತೆ ಅಣ್ಣಾಗಿರಿಯೂ ಆರಂಭವಾಯ್ತು. ಇದರಿಂದ ಯುವಶಕ್ತಿ ಒಗ್ಗಟ್ಟಿನಿಂದ, ಒಕ್ಕೊರಳಿನಿಂದ ಸಕರ್ಾರದ ಮೇಲೆ ಒತ್ತಡ ಹೇರಿತ್ತು. ಹೀಗೆ ಬೆಳಯುತ್ತಾ ಬಂದ ಕ್ರಾಂತಿಯ ಸೆಲೆ ವಿವಿಧ ರೂಪ ಪಡೆಯುತ್ತಾ ಇಂದು ಇಂಥ ಸ್ವರೂಪ ತಳೆದಿದೆ.
ಈ ಹಿಂದನಿಂದಲೂ ಪ್ರತಿಯೊನ್ನರೂ ಹೇಳುತ್ತಿದ್ದ ಸಾಮಾನ್ಯ ಮಾತಿನಂತೆ, ಕಾನೂನು ಶಿಕ್ಷಿಸುವುದು ಕೇವಲ ದುರ್ಬಲರನ್ನು ಎಂಬ ಮಾತು ಇಲ್ಲಿ ಸ್ವಲ್ಪ ಮಟ್ಟಿಗೆ ಸುಳ್ಳಾಗಿದೆ. ಇತ್ತೀಚೆಗೆ ಪ್ರಭಾವಿ ವ್ಯಕ್ತಿಗಳಿಗಾದ ಗತಿಯನ್ನು ನೋಡಿ ಜನರಿಗೆ ಕಾನೂನಿನ ಮೇಲಿದ್ದ ಅಪನಂಬಿಕೆಯ ಕಾಮರ್ೋಡ ಮಾಯವಾಗಿ ನಿರೀಕ್ಷೆಯ ಕಿರಣವೊಂದು ಟಿಸಿಲೊಡೆದಿದೆ. ಇದೆಲ್ಲಾ ಅಭಿವೃದ್ಧಿಯ ಪ್ರತೀಕವೇ ಅಥವಾ ಮಿಡಿಯಾ ಹಾಗೂ ರಾಜಕೀಯ ಪಕ್ಷಗಳ ಮಸಲತ್ತೇ ಎನ್ನುವ ವಿಷಯ ಇನ್ನು ಕೆಲವೇ ದಿನಗಳಲ್ಲಿ ಗೋಚರಿಸುವದರಲ್ಲಿ ಸಂದೇಹವಿಲ್ಲ.
ಮತ್ತಷ್ಟು ಗೋಮುಖವ್ಯಾಘ್ರರ ಸಾಚಾತನ ಬಯಲಿಗೆ ಬರಲಿದೆ.. ಇದೆಲ್ಲದರ ಹಿಂದೆ ಮಾಹಿತಿ ಹಕ್ಕು ಕಾಯ್ದೆ ಕಾರ್ಯವೈಖರಿಯನ್ನು ಎಂದೂ ಮರೆಯುವಂತಿಲ್ಲ.
ಆತೀಶ್ ಬಿ ಕೆ.

Friday, October 14, 2011

ಮುಂದೂ+ಭಯ=ಮುಂಭಯ

ಇತ್ತೀಚೆಗೆ ನಮ್ಮ ಸುತ್ತಲೂ ನಡೆಯುತ್ತಿರುವ ದಗಲ್ಬಾಜಿ ಸುತ್ತ ಒಂದು Reವೀವ್...

Thursday, October 13, 2011

ಲೈಫ್ ಇಸ್ ಮ್ಯಾಜಿಕ್ ಬಾಕ್ಸ್..!

ರಾ ದರ್ಬಾರು
ಕುಛ್ ಖಟ್ಟಾ; ಕುಛ್ ಮಿಠಾ..

ನಿಮಗೆ ಯಾವತ್ತಾದ್ರು ಯಾಕಾದ್ರು ದೊಡ್ಡವರಾದ್ವಪ್ಪಾ ಚಿಕ್ಕವರಿದ್ದಾಗೆ ಲೈಫ್ ಚೆನ್ನಾಗಿತ್ತು. ಒಂಥರಾ ಖುಷಿ ಇತ್ತು. (ಕುಛ್ ಖಟ್ಟಾ; ಕುಛ್ ಮಿಠಾ) ಎಂದೆನಿಸಿದೇನಾ?
ನನಗೆ ಮೊನ್ನೆ ಹಾಗೇ ಅನಿಸ್ತು! ಆಫಿಸ್ಗೆನೋ ರಜೆ ಇರ್ಲಿಲ್ಲಾ. ಆದ್ರು ಈ ಬಾರಿ ನಮ್ಮೂರಲ್ಲೇ ವಿಜಯದಶಮಿ ಆಚರಣೆ ಮಾಡ್ಬೇಕು ಅನ್ಕೊಂಡು ಹೊಗಿದ್ದೆ, ಆದ್ರೆ ಅಲ್ಲಿ ಆದದ್ದೇ ಬೇರೆ. ಪ್ರತಿ ವರ್ಷ ಇರುತ್ತಿದ್ದ ಖುಷಿ, ಉನ್ಮಾದ, ಭಾವೋದ್ವೇಗ ಹಾಗೂ ಚೈತನ್ಯ ಈ ಬಾರಿ ಕಾಣಲೇ ಇಲ್ಲ.
ಊರಲ್ಲಿದ್ದದ್ದು ಕೇವಲ ಒಂದೇ ಒಂದು ವಾರ. ಅದೆಲ್ಲಾ ಕಳೆದದ್ದು, ಮನೆಯಲ್ಲೇ ಹೊರತು ಎಲ್ಲಿಗೂ ಹೋಗೋದಕ್ಕೆ ಮನಸಾಗಲ್ಲಿಲ್ಲ. ತಿರುಗಾಡೋದಕ್ಕೆ ಸ್ನೇಹಿತರೂ ಊರಿಗೆ ಬಂದಿರಲಿಲ್ಲ. ಕಾರಣ ಅವರಿಗ್ಯಾರಿಗೂ ಲೀವ್ ಸಿಕ್ಕಿರಲಿಲ್ವಂತೆ. ಹೀಗಾಗಿ ಈ ಬಾರಿ ಮನೆಯೇ ಎನ್ನ ಪಾಲಿಗೆ ಮಂತ್ರಾಲಯವಾಗಿತ್ತು.
ಡಿಶ್ ಡಿಶುಮ್: ಅಮ್ಮ ಮಾಡಿದ್ದ ಚಕ್ಕಲಿ, ಕರಜಿಕಾಯಿ ಹಾಗೂ ಒಬ್ಬಟ್ಟು ಸೋ ಆನ್ ತಿಂದು ತಿನ್ನುತ್ತಲೇ ಕಾಲ ಕಳೆದೆ. ಹಾಗೇ ಬೋರ್ ಆದಾಗಂತೂ ಇದೇ ಅಲ್ಲಾ ಆ(3ಖ)ರ ಪೆಟ್ಟಿಗೆ! ಅದರ ಮುಂದೆ ಕಾಲ ಕಳೆದೆ, ಹಾಗೇ ಓದೊದಕ್ಕೆ ಏನೋ ಪುಸ್ತಕ ತಗೊಂಡುಹೋಗಿದ್ದೆ ಅಂತಾ ಬಚಾವಾದೆ. ಸೋ ಪುಸ್ತಕನೂ ಓದಿ ಮುಗಿಸೋದಕ್ಕಾಯಿತು.
ಬಟ್ ಈ ಹಿಂದೆಂದಿಗಿಂತ ಈ ಬಾರಿ ಮನೇಲಿ ಅದ್ರಲ್ಲೂ ಸ್ಪೆಷಲ್ಲಿ ಅಮ್ಮನ ಜತೆ ಸ್ವಲ್ಪ ಜಾಸ್ತಿನೇ ಸಮಯ ಕಳೆಯೋದಕ್ಕೆ ಅವಕಾಶ ಸಿಕ್ತು. ಬೆಂಗಳೂರು ಊಟ ತಿಂದು ಸಾಕಾಗಿತ್ತು, ವ್ಹಾ ಅಮ್ಮನ ಕೈ ಊಟ ನೆನೆಸಿಕೊಂಡರೆ ಈಗಲೂ ಬಾಯಲ್ಲಿ ನೀರು ಬರುತ್ತೆ. ಒಂಥರಾ ಖುಷಿಯಲ್ಲಿ ಮನಸು ತೇಲಾಡುತ್ತೆ. ಅದ್ರಲ್ಲೂ ಜೋಳದ ರೊಟ್ಟಿ, ಶೇಂಗಾ ಚಟ್ನಿ ತಿನ್ನದೇ ತುಂಬಾನೇ ದಿನಗಳು ಕಳೆದಿದ್ವು. ಹಬ್ಬ ಇತ್ತು ಹೀಗಾ ರೊಟ್ಟಿ ಏನೂ ತಿನ್ನಕ್ಕಾಗಲಿಲ್ಲ. ಆದರೆ, ಹಬ್ಬದ ಮರುದಿನದಿಂದಂತೂ ರೊಟ್ಟಿಯದ್ದೇ ಪಾರುಪತ್ಯ.
ಮೊನ್ನೆ ಅಂದ್ರೆ ಸಂಡೇ ಮತ್ತೆ ಬೆಂಗಳೂರಿಗೆ ಬಂದಿದ್ದೀನಿ, ಲೆಟ್ಸ್ ಮತ್ತೆ ಅದೇ ಹೋರಾಟ, ಅದೇ ಬದುಕು ನಡೀತಾ ಇದೆ. ಬಹುಶಃ ದೀಪಾವಳಿಗೆ ಊರಿಗೆ ಹೋಗೋದಕ್ಕಾಗಲ್ಲ ಅನಸುತ್ತೆ. ಏನೆ ಇರಲಿ ಈ ಬಾರಿ ಮನೇಲಿ ಕಳೆದ ಟೈಮ್ ಮರೆಯಲಾಗದು.. ಅಮ್ಮನನ್ನು ಮಾತ್ರ ತುಂಬಾ ಮಿಸ್ ಮಾಡ್ಕೋತಿನಿ.. ಫ್ರೆಂಡ್ಸ್ ನಿಮ್ದು ಅದೇ ಕಥೆ ಅನ್ಕೋತಿನಿ.. ಇಸ್ ಇಟ್?